ತುಮಕೂರು


ನಗರದ ಮಹಾನಗರ ಪಾಲಿಕೆವತಿಯಿಂದ 1927ರಲ್ಲಿ ಸ್ವಾತಂತ್ರ ಹೋರಾಟಕ್ಕೆ ಜನರು ಪಾಲ್ಗೊಳ್ಳುವಂತೆ ಮಾಡಲು ರಾಷ್ಟ್ರಪಿತ ಮಹಾತ್ಮಗಾಂಧಿ ತುಮಕೂರಿಗೆ ಆಗಮಿಸಿ,ವಿಶ್ರಾಂತಿ ಪಡೆದಿದ್ದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಗಾಂಧಿ ಭವನದ ನವೀಕರಣಕ್ಕೆ ಸಂಸದ ಜಿ.ಎಸ್.ಬಸವರಾಜು, ಮೇಯರ್ ಶ್ರೀಮತಿ ಪ್ರಭಾವತಿ ಸುಧೀಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಶಾಸಕರಾದ ಜಿ.ಬಿ.ಜೋತಿಗಣೇಶ್,ಉಪಮೇಯರ್ ನರಸಿಂಹಮೂರ್ತಿ, ಪಾಲಿಕೆ ಸದಸ್ಯರಾದ ನಯಾಜ್, ಧರಣೇಂದ್ರಕುಮಾರ್, ಮನು,ನರಸಿಂಹರಾಜು,ರೂಪಶ್ರೀಶೆಟ್ಟಾಳಯ್ಯ, ಶ್ರೀಮತಿ ಗಿರಿಜಾ ಧನಿಯಕುಮಾರ್,ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಇಇ ಶ್ರೀಮತಿ ಆಶಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)