BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • “ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’
  • ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ
  • ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ
  • ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ
  • ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ
  • ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ
  • ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
  • ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಂಬೇಡ್ಕರ್ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪ್ರಶ್ಯತೆ ಇರುತ್ತಿರಲಿಲ್ಲ: ಡಾ.ಜಿ.ಪರಮೇಶ್ವರ್
ತುಮಕೂರು

ಅಂಬೇಡ್ಕರ್ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪ್ರಶ್ಯತೆ ಇರುತ್ತಿರಲಿಲ್ಲ: ಡಾ.ಜಿ.ಪರಮೇಶ್ವರ್

By News Desk BenkiyabaleUpdated:May 11, 2022 6:56 pm

ತುಮಕೂರು:
ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಬಾಲಭವನದಲ್ಲಿ ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು.
ನಾನು ತಿಳಿದಂತೆ ಪ್ರಪಂಚದ ಯಾವುದೇ ದೇಶದಲ್ಲಿ ಈ ರೀತಿಯ ಶ್ರೇಣಿಕೃತ ಜಾತಿ ವ್ಯವಸ್ಥೆ ಇಲ್ಲ.ಮೊದಲು ಕುಲಕಸುಬನ ಗಳಾಗಿದ್ದ ಸಮಾಜಗಳು ನಂತರ ಜಾತಿಗಳಾಗಿ ಪರಿವರ್ತನೆಯಾಗಿದ್ದು ವಿಪರ್ಯಾಸ.ಅದರಿಂದಾಗುವ ತೊಂದರೆಗಳು ಅಪಾರ. ಇಡೀ ವಿಶ್ವವೇ ಅಂಬೇಡ್ಕರ್ ಅವರ ವಿದ್ವತ್‍ಗೆ ಮಾರು ಹೋಗಿ,ವಿಶ್ವನಾಯಕ ಎಂದು ಕೋಡಾಡಿದರೂ ಸಹ ಭಾರತದಲ್ಲಿ ಮಾತ್ರ ಅಂಬೇಡ್ಕರ್ ಅವರನ್ನು ಇಂದಿಗೂ ಜಾತಿಯ ಹೆಸರಿನಲ್ಲಿಯೇ ಗುರುತಿಸಲಾಗುತ್ತಿದೆ.ಇದಕ್ಕಿಂತ ದೊಡ್ಡ ದುರಂತ ಮತ್ತೊಂದು ಇದೆಯೇ ಎಂದು ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು.
ಅಂಬೇಡ್ಕರ್ ಅವರು ಭಾರತದ ದಲಿತರಿಗಾಗಿ ಸಂವಿಧಾನ ಬರೆಯಲಿಲ್ಲ.ಇಡೀ ದೇಶದ ಎಲ್ಲಾ ವರ್ಗಗಳು ಅವರ ಸಂವಿಧಾನದ ಫಲವನ್ನು ಅನುಭವಿಸುತ್ತಿವೆ. ಭಕ್ರಾನಾಂಗಲ್ ಅಣೆಕಟ್ಟು,ಆರ್.ಬಿ.ಐ ಸೇರಿದಂತೆ ಹಲವಾರು ಮಹತ್ವದ ಯೋಜನೆಗಳಿಗೆ ಅಡಿಪಾಯ ಹಾಕಿದವರು ಬಾಬಾ ಸಾಹೇಬ್ ಅಂಬೇಡ್ಕರ್,ಹಾಗಾಗಿ ಅವರನ್ನು ಎಲ್ಲಾ ವರ್ಗದ ಜನರು ಸ್ಮರಿಸುವಂತಹ ವಾತಾವರಣ ನಿರ್ಮಾಣವಾಗಬೇಕೆಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.
ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದ ಸಂಶೋಧಕ ವಿಠಲ್ ವಗ್ಗಲ್ ಮಾತನಾಡಿ, ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳ ಸಂಪುಟ ತಯಾರಿಸುವ ವೇಳೆ ಹಲವಾರು ತಪ್ಪುಗಳನ್ನು ಮಾಡಲಾಗಿದೆ. ಇವುಗಳನ್ನು ಸರಿಪಡಿಸಲು ಸರಕಾರಕ್ಕೆ ಮನವಿ ಮಾಡಬೇಕು.ಮಹಾನಾಯಕರ ಜಾತಿಯನ್ನೇ ಹೈಜಾಕ್ ಮಾಡಲಾಗಿದೆ.ಇದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದರು.
ಸ್ವಾತಂತ್ರಪೂರ್ವದಲ್ಲಿ ತಮ್ಮ ಕುಲಕಸುಬುಗಳನ್ನೇ ನಂಬಿ ಬದುಕುತಿದ್ದ ಹಿಂದುಳಿದ ವರ್ಗಗಳು,ಇಂದು ಓಬಿಸಿ ಹೆಸರಿನಲ್ಲಿ ಒಂದಷ್ಟು ಸರಕಾರಿ ಉದ್ಯೋಗ,ಸವಲತ್ತು ಪಡೆದಿದ್ದರೆ ಇದಕ್ಕೆ ಕಾರಣ ಅಂಬೇಡ್ಕರ್ ಅವರು ಬರೆದ ಸಂವಿಧಾನವೇ ಕಾರಣ. ಆದರೆ ಓಬಿಸಿಯವರು ಅಂಬೇಡ್ಕರ್ ಅವರನ್ನು ಮೆರೆತು ಬೇರೆ ಜನರನ್ನು ಮೆರೆಸಲು ಮುಂದಾಗಿರುವುದು ವಿಪರ್ಯಾಸವೇ ಸರಿ ಎಂದು ವಿಠಲ್ ವಗ್ಗಲ್ ನುಡಿದರು.
ಅಂಬೇಡ್ಕರ್ ಜಯಂತಿ ಮಾಡುವ ಉದ್ದೇಶ, ನಾಲಾಯಕ್ ಜನರನ್ನು ಲಾಯಕ್ ಆಗಿ ಮಾಡುವುದಾಗಿದೆ. ಉಪಯೋಗಕ್ಕೆ ಬಾರದ ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಮಾಜ ಕಟ್ಟುವ ಕಡೆಗೆ ಬಳಸಿಕೊಳ್ಳಲು ಇಂತಹ ಜಯಂತಿಗಳು ಅವಶ್ಯಕ.ಈ ನಿಟ್ಟಿನಲ್ಲಿ ಛಲವಾದಿ ಸಮುದಾಯ ಒಳ್ಳೆಯ ಕೆಲಸ ಮಾಡಿದೆ ಎಂದ ಅವರು,ಶಿಕ್ಷಣದ ಜೊತೆಗೆ ಜಾಗೃತಿ,ಜಾಗೃತಿಯಿಂದ ನಾಯಕತ್ವ ಬೆಳೆಯುತ್ತದೆ.ಆದರೆ ನಮ್ಮ ಲೀಡರ್‍ಗಳು, ಡೀಲರ್‍ಗಳಾಗಿರುವುದು ಇಂದಿನ ದುರಂತಕ್ಕೆ ಕಾರಣ.ಹುಟ್ಟಿದ ಮೇಲೆ ಮನುಷ್ಯ ಸಾಯುವುದು ಖಚಿತ.ಏನನ್ನಾದರೂ ಸಾಧನೆ ಮಾಡಿ ಎಂಬುದು ಅಂಬೇಡ್ಕರ್ ಅವರ ಸಂದೇಶವಾಗಿದೆ ಎಂದು ವಿಠಲ್ ವಗ್ಗಲ್ ತಿಳಿಸಿದರು.
ಮತ್ತೊಬ್ಬ ಭಾಷಣಕಾರ ಡಾ.ಗೋವಿಂದರಾಯ ಮಾತನಾಡಿ,ನಮ್ಮನ್ನು ಉದ್ದಾರ ಮಾಡಲು ಯಾರಿಂದಲೂ ಸಾಧ್ಯವಿಲ್ಲ.ಹಾಗಾಗಿ ನಮ್ಮ ಉದ್ದಾರ ನಮ್ಮಿಂದಲೇ ಎಂಬ ಸ್ವಯಂ ಧೈರ್ಯವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕಿದೆ. ಇದು ಅಂಬೇಡ್ಕರ್ ನಮಗಾಗಿ ನೀಡಿದ ತತ್ವವಾಗಿದೆ ಎಂದರು.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಚಿತ್ರದುರ್ಗದ ಛಲವಾದಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀಬಸವನಾಗೀದೇವ ಶರಣರು ವಹಿಸಿದ್ದರು.ಪಾಲಿಕೆ ಸದಸ್ಯರಾದ ಶ್ರೀಮತಿ ಪ್ರಭಾವತಿ ಸುಧೀಶ್ವರ್,ಮಾಜಿ ಶಾಸಕ ಡಾ.ರಫೀಕ್ ಅಹಮದ್,ಹರಿಕಥಾ ವಿದ್ವಾನ್ ಡಾ.ಲಕ್ಷ್ಮಣದಾಸ್, ಚಿತ್ರದುರ್ಗದ ಛಲವಾದಿ ಗುರುಪೀಠದ ಅಧ್ಯಕ್ಷರು ಹಾಗೂ ಭೂ ಸೇನಾ ನಿಗಮದ ಮಾಜಿ ಅಧ್ಯಕ್ಷ ಲಕ್ಷ್ಮಿನರಸಿಂಹಯ್ಯ, ಸರಕಾರಿ ಅಭಿಯೋಜಕರಾದ ಎಸ್.ರಾಜಣ್ನ, ವಕೀಲರು ಹಾಗೂ ಜಿಲ್ಲಾ ಕಾಂಗ್ರೆಸ್ ಎಸ್ಸಿ ಸೇಲ್ ಅಧ್ಯಕ್ಷರಾದ ಬಿ.ಜಿ.ಲಿಂಗರಾಜು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹೆಚ್.ಅತೀಕ್ ಅಹಮದ್ ಸೇರಿದಂತೆ, ಒಕ್ಕೂಟದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

(Visited 40 times, 1 visits today)
tumkur
Previous Articleರೋಗವಾಹಕ ಆಶ್ರಿತ ರೋಗಗಳ ಬಗ್ಗೆ ಎಚ್ಚರಿಕೆ ಅಗತ್ಯ
Next Article ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಮೂಡಿದರೆ ಸತ್ಪ್ರಜೆಗಳಾಗುತ್ತಾರೆ
News Desk Benkiyabale

Related Posts

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

“ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’

March 27, 2026 2:56 pm
ಇತರೆ ಸುದ್ಧಿಗಳು

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

March 26, 2026 5:25 pm
ಇತರೆ ಸುದ್ಧಿಗಳು

ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ

March 26, 2026 5:23 pm
ಇತರೆ ಸುದ್ಧಿಗಳು

ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ

March 26, 2026 5:21 pm
ಇತರೆ ಸುದ್ಧಿಗಳು

ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ

March 26, 2026 5:20 pm
ಇತರೆ ಸುದ್ಧಿಗಳು

ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ

March 26, 2026 5:19 pm
Our Youtube Channel
Our Picks

“ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’

March 27, 2026 2:56 pm

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

March 26, 2026 5:25 pm

ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ

March 26, 2026 5:23 pm

ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ

March 26, 2026 5:21 pm

ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ

March 26, 2026 5:20 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

“ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’

By News Desk BenkiyabaleMarch 27, 2026 2:56 pm

ತುಮಕೂರು: ಜೀವನದಲ್ಲಿ ಎದುರಾಗುವ ಕಷ್ಟ-ಸುಖ ಹಾಗೂ ನೋವು-ನಲಿವುಗಳು ಸಹಜ ಪ್ರಕ್ರಿಯೆಗಳಾಗಿದ್ದು, ಇವು ಯಾವುದೂ ಮನುಷ್ಯನ ಸಾಧನೆಯ ಹಾದಿಗೆ ಅಡ್ಡಿ ಯಾಗಬಾರದು…

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

March 26, 2026 5:25 pm

ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ

March 26, 2026 5:23 pm

ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ

March 26, 2026 5:21 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.