ತುಮಕೂರು:

         ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮಾರ್ಚ್ 12ರ ಬೆಳಿಗ್ಗೆ 6ಗಂಟೆಯವರೆಗೆ ಜಾರಿಗೊಳಿಸಿರುವ ಕಫ್ರ್ಯೂ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

         ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಮೂಲಕ ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕಿನ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಅವರು ಸೂಚನೆಗಳನ್ನು ನೀಡಿದರು.

         ಕಫ್ರ್ಯೂ ಅವಧಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗದಂತೆ ಯಾವ್ಯಾವ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆಯೋ ಅವುಗಳಿಗೆ ಅವಕಾಶ ಮಾಡಿಕೊಡಿ. ಅನಗತ್ಯವಾಗಿ ತಿರುಗಾಡುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಿದರು.

       ಯಾವುದೇ ಕಾರಣಕ್ಕೂ ಯಾವುದಕ್ಕೂ ಯಾರಿಗೂ ಪಾಸ್ ವಿತರಿಸುವುದಿಲ್ಲ. ಹಾಗಾಗಿ ಅನುಮತಿ ಕಲ್ಪಿಸಲಾಗಿರುವ ಚಟುವಟಿಕೆಗಳಿಗೆ ತೆರಳುವವರಿಗೆ ಅವರ ಐಡಿ ಕಾರ್ಡ್ ನೋಡಿ ಅವಕಾಶ ಮಾಡಿಕೊಡಬೇಕು. ಮದುವೆಗೆ ತೆರಳುವವರಿಗೂ ಆಮಂತ್ರಣ ಪತ್ರ ಆಧಾರದ ಮೇಲೆ ತೆರಳಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

       ಖಾಸಗಿ ಮತ್ತು ಸರ್ಕಾರಿ ಬಸ್‍ಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿವೆ. ತುರ್ತು ಸೇವೆಗೆ ವಾಹನಗಳ ಸಂಚಾರಕ್ಕೆ ಅನುಮತಿಯಿದ್ದು, ಸೂಕ್ತವಾಗಿ ಪರಿಶೀಲಿಸಿ ಅವರಿಗೆ ಅವಕಾಶ ನೀಡಬೇಕು. ಯಾವುದೇ ಕಾರಣಕ್ಕೂ ದೂರುಗಳು ಕೇಳಿಬರದಂತೆ ಮಾರ್ಗಸೂಚನೆಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.

       ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವಂತೆ ಆದೇಶ ನೀಡಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ನಡೆಯಲಿರುವ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದರು.

      ಮುಂದಿನ ದಿನಗಳಲ್ಲಿ ರಕ್ತ ಕೊರತೆಯಾಗಬಾರದು. ಆದ್ದರಿಂದ ಮಾರ್ಗಸೂಚಿಯನ್ವಯ ರಕ್ತದಾನಿಗಳಿಗೆ ರಕ್ತದಾನ ಮಾಡಲು ಅವಕಾಶ ಮಾಡಿಕೊಡಿ. ಆದರೆ ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಸಲು ಅವಕಾಶ ಮಾಡಿಕೊಡಬೇಡಿ. ಮದುವೆಗಳು ನಿಯಮ ಉಲ್ಲಂಘನೆ ಯಾಗದಂತೆ ನಿಗಾವಹಿಸಿ. ಜಾತ್ರೆ, ಸಭೆ, ಸಮಾರಂಭ ಹಾಗೂ ಗುಂಪು ಸೇರುವುದಕ್ಕೆ ಅವಕಾಶ ಮಾಡಿಕೊಡಬೇಡಿ. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಫ್ರ್ಯೂ ಯಶಸ್ವಿಗೊಳಿಸಿ ಎಂದು ತಿಳಿಸಿದರು.

       ಜಿಲ್ಲೆಯಲ್ಲಿ ಹಾಸಿಗೆ ಮತ್ತು ಆಮ್ಲಜನಕ, ರೆಮಿಡಿಸಿಯರ್ ಕೊರತೆ ಉಂಟಾಗದಂತೆ ಸದಾ ಜಾಗರೂಕರಾಗಿರಬೇಕು. ಆಮ್ಲಜನಕ ಶೇ.25ರಷ್ಟು ಖಾಲಿಯಾಯಿತು ಎನ್ನುವಷ್ಟರಲ್ಲೇ ಮತ್ತೆ ಖಾಲಿಯಾದ ಆಮ್ಲಜನಕವನ್ನು ತುಂಬಿಸಿಕೊಳ್ಳುವ ಕಾರ್ಯ ಮಾಡಬೇಕು. ಆಮ್ಲಜನಕ ಸಿಗದೆ ಸೋಂಕಿತ ಸಾವನ್ನಪ್ಪಿದ ಎಂಬ ದೂರುಗಳು ಕೇಳಿ ಬರಬಾರದು. ಅದರಂತೆಯೇ, ಸೋಂಕಿತರ ಪತ್ತೆ ಕಾರ್ಯ ಕಡಿಮೆ ಇರುವ ತಾಲೂಕುಗಳು ಪತ್ತೆ ಕಾರ್ಯವನ್ನು ಹೆಚ್ಚಿಸಬೇಕು. ನಿರ್ಲಕ್ಷ್ಯ ತೋರದೆ ಕೇಂದ್ರ ಸ್ಥಳದಲ್ಲಿಯೇ ವಾಸ್ತವ್ಯವಿದ್ದು, ಕೋವಿಡ್ ಕೆಲಸಕ್ಕೆ ಮೊದಲಾದ್ಯತೆ ನೀಡಬೇಕು ಎಂದು ತಿಳಿಸಿದರು.

       ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಮಾತನಾಡಿ, ಯಾರೂ ನಿರ್ಲಕ್ಷ್ಯ ತೋರದೆ ಕೋವಿಡ್ ಕಾರ್ಯಕ್ಕೆ ಸಹಕರಿಸಿ. ಕಫ್ರ್ಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ಎಂದು ನಿರ್ದೇಶಿಸಿದರು.
ಕಫ್ರ್ಯೂ ಸಮಯದಲ್ಲಿ ನೀಡಲಾಗಿರುವ ಅನುಮತಿಗಳಿಗೆ ಅವಕಾಶ ಮಾಡಿಕೊಟ್ಟು, ಅನಗತ್ಯವಾಗಿ ಸಂಚರಿಸುವವರಿಗೆ ಕಡಿವಾಣ ಹಾಕಬೇಕು ಎಂದ ಅವರು, ಹೋಟೆಲ್, ರೆಸ್ಟೋರೆಂಟ್‍ನಲ್ಲಿ ಪಾರ್ಸಲ್‍ಗೆ ಅನುಮತಿಯಿದ್ದು, ಅವು ಕಾರ್ಯನಿರ್ವಹಿಸಲಿವೆ. ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿಯಿದೆ. ಸಾಂತ್ವಾನ ಕೇಂದ್ರಗಳು ಎಂದಿನಂತೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.

       ಗೂಡ್ಸ್ ವಾಹನಗಳ ಸಂಚಾರಕ್ಕೆ ಅನುಮತಿಯಿದೆ ಅವುಗಳ ಸಂಚಾರಕ್ಕೆ ತಡೆ ಮಾಡಬಾರದು. ಅದರಂತೆಯೇ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭದ ಹಿನ್ನೆಲೆಯಲ್ಲಿ ತೆರಳುವ ವಾಹನಗಳಿಗೆ ಅನುಮತಿಯಿದೆ ಎಂದು ತಿಳಿಸಿದರು. ಕಟ್ಟಡ ನಿರ್ಮಾಣ ಕಾಮಗಾರಿಗೆ ತೆರಳುವವರಿಗೆ ಮತ್ತು ಕಟ್ಟಡಕ್ಕೆ ಸಂಬಂಧಿಸಿದ ಅಂಗಡಿ ತೆರೆಯುವುದಕ್ಕೂ ಅನುಮತಿಯಿದ್ದು, ನಿರ್ಬಂಧ ಮಾಡಬಾರದು. ಸೋಮವಾರದಿಂದ-ಶುಕ್ರವಾರದವರೆಗೆ ಮಾತ್ರ ಕಾಮಗಾರಿ ತೆರಳುವವರ ಸಂಚಾರಕ್ಕೆ ಅನುಮತಿಯಿದ್ದು, ವಾರಾಂತ್ಯದ ಕಫ್ರ್ಯೂನಲ್ಲಿ ಸಂಚಾರಕ್ಕೆ ಅನುಮತಿಯಿಲ್ಲ. ಆದರೆ, ಕಾಮಗಾರಿ ನಡೆಯುವ ಸ್ಥಳದಲ್ಲೇ ಇದ್ದು, ಕೆಲಸ ಮಾಡಲು ಅನುಮತಿಯಿದೆ ಎಂದರು.

(Visited 8 times, 1 visits today)