ತುಮಕೂರು :

      ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ತುಮಕೂರು ಜಿಲ್ಲೆಯ ವಿವಿಧ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಮೇ 13 ರಿಂದ 31ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ: ಕೆ.ರಾಕೇಶ್‍ಕುಮಾರ್ ಅವರು ಆದೇಶಿಸಿದ್ದಾರೆ.

      ಗುಬ್ಬಿ ತಾಲ್ಲೂಕಿನ ಹೊಸಕೆರೆ, ತ್ಯಾಗಟೂರು, ಜಿ.ಹೊಸಹಳ್ಳಿ, ಹಿಂಡಸ್ಕೆರೆ, ಸಿ.ಎಸ್.ಪುರ, ಬ್ಯಾಡಗೆರೆ ಗ್ರಾಮಪಂಚಾಯತಿ; ಕುಣಿಗಲ್ ತಾಲೂಕಿನ ತೆರೇದಕುಪ್ಪೆ; ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರು; ತುರುವೇಕೆರೆ ತಾಲೂಕಿನ ಮುನಿಯೂರು(2 ಕ್ಷೇತ್ರ) ಹಾಗೂ ದಬ್ಬೇಘಟ್ಟ; ಮಧುಗಿರಿ ತಾಲೂಕಿನ ಸಿಂಗನಹಳ್ಳಿ, ಶಿರಾ ತಾಲೂಕಿನ ತಡಕಲೂರು; ಪಾವಗಡ ತಾಲೂಕಿನ ಕೊಡಮಡಗು ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

     ಚುನಾವಣೆ ನಡೆಯಲಿರುವ ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ಮೇ 13 ರಿಂದ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಸದರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮೊಹರು ಸಹಿತ ಮುಚ್ಚಬೇಕು. ಮೊಹರು ಮಾಡಿದ ಕೀ ಅನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ್‍ಗೆ ಒಪ್ಪಿಸತಕ್ಕದ್ದು. ಗ್ರಾಮ ಪಂಚಾಯತಿ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿ ಚುನಾವಣೆ ನಡೆಯದಿದ್ದಲ್ಲಿ ಈ ಆದೇಶ ಅನ್ವಯವಾಗುವುದಿಲ್ಲ ಅವರು ಆದೇಶಿಸಿದ್ದಾರೆ.

(Visited 33 times, 1 visits today)