ತುಮಕೂರು
ಗುಬ್ಬಿಯಲ್ಲಿ ಡಿಎಸ್ಎಸ್ ಮುಖಂಡ ನರಸಿಂಹಮೂರ್ತಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ದಲಿತ ಮುಖಂಡ ನರಸಿಂಹಮೂರ್ತಿ ಅವರ ಶವ ವೀಕ್ಷಿಸಿದರು.
ಇದರೊಂದಿಗೆ ಪರಿಶೀಲನೆ ನಡೆಸಿ ಪೆÇಲೀಸ್ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.
ಇದೇ ಸಂದರ್ಭದಲ್ಲಿ ತುಮಕೂರಿನ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಹತ್ಯೆಯಾಗಿರುವ ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಶವ ತಂದಿರುವ ಹಿನ್ನೆಲೆಯಲ್ಲಿ ನೂರಾರು ದಲಿತ ಸಂಘಟನೆಗಳ ಮುಖಂಡರುಗಳು ಸ್ಥಳದಲ್ಲಿ ಜಮಾಯಿಸಿದ್ದರು.
(Visited 336 times, 1 visits today)