ಗುಬ್ಬಿ:


ತಾಲ್ಲೂಕಿನಲ್ಲಿ ಶಾಸಕರ ದುರಾಡಳಿತ ದಿಂದ ಜನತೆ ಬೇಸತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ನೇರ ವಾಗ್ದಾಳಿ ನಡೆಸಿದರು.
ಗುಬ್ಬಿ ತಾಲ್ಲೂಕಿನಲ್ಲಿ 20ವರ್ಷಗಳಿಂದ ಶಾಸಕರಾಗಿರುವ ನೀನು ತಾಲ್ಲೂಕಿನ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂಬುದನ್ನು ತೋರಿಸಿ ನೋಡೋಣ ಕೇವಲ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರಕ್ಕೆ ನೇರ ಕಾರಣ ಶಾಸಕ ಎಸ್. ಆರ್.ಶ್ರೀನಿವಾಸ್ ಎಂದು ನೇರ ಆರೋಪ ಮಾಡಿದರು.
ಗುಬ್ಬಿ ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಗುಬ್ಬಿ ತಾಲ್ಲೂಕಿನ ಲ್ಲಿ ನೆಡೆದಿರುವ ಭೂ ಹಗರಣವನ್ನು ಸಿಒಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಇಂದು ಆಯೋಜಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ದ ಅವರು ಶಾಸಕರೇ ನಾನಂತು ಬಗರುಕುಂ ಸಾಗುವಳಿ ಮತ್ತು 50.53 ಬಗ್ಗೆ ಪಿ ಹೆಚ್ ಡಿ ಪದವಿ ಮಾಡಿಲ್ಲ ನೀವು ಬಗರುಕುಂ ಸಮಿತಿ ಅಧ್ಯಕ್ಷ ರಾಗಿರುವವರು ಸಾಗುವಳಿ ವಿತರಣೆ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರಿಗೆ ಅನ್ಯಾಯ ಮಾಡಲು ಮುಂದಾಗಬೇಡಿ.
ಇಂದು ರೈತರ ಜಮೀನು ಕಬಳಿಸಲು ಮುಂದಾಗಿರುವ ಭ್ರಷ್ಟ ಅಧಿಕಾರಿಗಳು ಮತ್ತು ತಮ್ಮ ಬೆಂಬಲಿಗರಿಗೆ ರೈತರಿಗೆ ಸಿಗಬೇಕಾದ ಜಮೀನಿನಲ್ಲಿ ಪ್ರಭಾವಿಗಳ ಹೆಸರಿಗೆ ಮಂಜೂರಾತಿ ಮಾಡುವ ಮೂಲಕ ಬಡವರ ಜಮೀನು ಕಬಳಿಸಲು ಮುಂದಾಗಿರುವುದು ಸರಿಯಲ್ಲ.ಇಂದು ಸುಮಾರು 450 ಎಕರೆ ಸರ್ಕಾರಿ ಜಮೀನು ಬ್ರಹಾಂಡ ಭ್ರಷ್ಟಾಚಾರ ದಲ್ಲಿ ತೋಡಗಿ ತಾಲೂಕು ಕಛೇರಿಯ ಸಿಬ್ಬಂದಿ ಹಣ ಮಾಡುವ ಆಸೆಗೆ ಬಿದ್ದು ತಮ್ಮ ಜೇಬು ತುಂಬಿಸಲು ಹೋಗಿ ಇಂದು ಜೈಲು ಪಾಲಾಗಿದ್ದಾರೆ.
ಕೇವಲ ಚುನಾವಣಾ ಸಮಯದಲ್ಲಿ ಮಾತ್ರ ಜನತೆಯ ಪರವಾಗಿ ನಿಲುವು ತೋರುವುದು ಬಿಟ್ಟರೆ ತಾಲ್ಲೂಕಿನ ಯಾವ ರೈತರಿಗೆ ನ್ಯಾಯ ದೊರಕಿಸುವಲ್ಲಿ ನಿಮ್ಮ ನಿಲುವು ಇದೆ ಎಂಬುದು ತಾಲ್ಲೂಕಿನ ಜನತೆಗೆ ತಿಳಿದಿದೆ ಈ ಬಾರಿ ಜನತೆ ನಿಮ್ಮ ದುರಾಡಳಿತ ದಿಂದ ಸಾಕಷ್ಟು ನೊಂದಿದ್ದು ಜನತೆ ಮತ್ತು ರೈತರ ಶಾಪ ನಿಮಗೆ ತಟ್ಟದೆ ಬಿಡುವುದಿಲ್ಲ ಇದಕ್ಕೆ ನೀವು ಪಶ್ಚಾತಾಪ ಪಡುವ ದಿನಗಳು ಸಮೀಪದಲ್ಲಿ ಬರಲಿದೆ ಎಂದು ಶಾಸಕ ಎಸ್. ಆರ್.ಶ್ರೀ ನಿವಾಸ್ ವಿರುದ್ಧ ಗಂಭೀರ ಆರೋಪ ಮಾಡಿದರು.
ತಾವು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಸಮಯದಲ್ಲಿ ತಾಲ್ಲೂಕಿನ ರಾಜಕೀಯ ಮುಖಂಡರೊಬ್ಬರು ಭ್ರಷ್ಟಾಚಾರದ ಲ್ಲಿ ಸಿಲುಕಿದಾಗ ಗುಬ್ಬಿ ಪೆÇಲೀಸರು ಅವರನ್ನು ಚಡ್ಡಿ ಯಲ್ಲಿ ಠಾಣೆಯಲ್ಲಿ ಕುರಿಸಿದ ಸಮಯದಲ್ಲಿ ನಾನು ಆತನನ್ನು ಬಿಡಿಸಿದ್ದು ಎಂದು ಹೇಳುವ ನೀನು ಭ್ರಷ್ಟಾಚಾರದಲ್ಲಿ ತೊಡಗುವವರನ್ನು ಯಾಕೆ ಬಿಡಿಸಿಕೊಂಡು ಬಂದಿರಿ ಎಂದು ಪ್ರಶ್ನೀಸಿದರು.
ತಾಲೂಕಿನಲ್ಲಿ ಇಲ್ಲಿಯವರೆಗೂ ಯಾವುದೇ ಗುರುತರವಾದ ಉದ್ಯೋಗ ಸೃಷ್ಟಿಯನ್ನು ಮಾಡದೆ ಚುನಾವಣಾ ಸಮಯದಲ್ಲಿ ತಮ್ಮ ಹಿಂಬಾಲಕರ ದರ್ಪದಿಂದ ಚುನಾವಣೆ ಗೆಲ್ಲುವುದು ಮುಖ್ಯವಲ್ಲ ತಾಲೂಕಿನ ರೈತ ಹಾಗೂ ಬಡ ಕುಟುಂಬಗಳ ಕಷ್ಟ ಸುಖಗಳಿಗಳಿಗೆ ಸ್ಪಂದಿಸುವಂತಹ ಜನಪ್ರತಿನಿಧಿಯಾಗಬೇಕು. ಕೇವಲ ತನ್ನ ಹಿಂಬಾಲಕರ ಅಭಿವೃದ್ಧಿಗೆ ಸರ್ಕಾರದಿಂದ ಬಂದಂತ ಕಾಮಗಾರಿ ಗುತ್ತಿಗೆಗಳನ್ನು ನೀಡಿ ಚುನಾವಣಾ ಸಮಯದಲ್ಲಿ ಸಹಕಾರ ನೀಡಿದ ಋಣವನ್ನು ತೀರಿಸಲು ಈ ರೀತಿಯ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಿರುವುದು ಇವರ ಕಾರ್ಯವೈಕರಿಗೆ ಹಿಡಿದ ಕೈಗನ್ನಡಿ ಎಂದು ಆರೋಪಿಸಿದರು.
ಈ ಭೂ ಮಾಫಿಯಾ ದಂಧೆಯ ಹಿಂದಿರುವ ಕಾಣದ ಕೈಗಳನ್ನು ಕಂಡುಹಿಡಿಯಲು ಸಿಓಡಿ ತನಿಖೆಗೆ ಒಪ್ಪಿಸಲು ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಮುಖಾಂತರ ತನಿಖೆಗೆ ಒಳಪಡಿಸಲು ಒಪ್ಪಿಸುತ್ತೇವೆ ಎಂದರು.
ಜೆಡಿಎಸ್ ಮುಖಂಡ ಜೆ.ಡಿ ಸುರೇಶ್ ಗೌಡ ಮಾತನಾಡಿ ಶಾಸಕರು ತಮ್ಮ ಹಿಂಬಾಲಕರಿಗೆ ರೈತರು ಉಳುಮೆ ಮಾಡುತ್ತಿರುವ ಜಾಗವನ್ನು ನೀಡಿರುವುದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ ತಾಲೂಕಿನ ಹಳ್ಳಿಗಾಡಿನ ರಸ್ತೆಗಳು ಪಟ್ಟಣದ ರಸ್ತೆಗಳು ಇವುಗಳನ್ನು ನೋಡಿದರೆ ಅಭಿವೃದ್ಧಿ ಕಾರ್ಯದ ಕಾರ್ಯವೈಕರಿಯೇ ಜನತೆಗೆ ತಿಳಿಯುತ್ತದೆ. ಶಾಸಕರ ಎಂಬಾಲಕರು ಎಷ್ಟು ಜನ ಜೈಲು ಸೇರಿದ್ದಾರೆ ಎಂದು ಪ್ರಶ್ನಿಸಿದವರು. ಇದೇ ಸಂದರ್ಭದಲ್ಲಿ ತಹಸೀಲ್ದಾರ್ ರವರ ಮುಖಾಂತರ ಕಂದಾಯ ಸಚಿವರಿಗೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳಿಗೆ ಭೂ ಹಗರಣದ ಬಗ್ಗೆ ಸಿಓಡಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದರು.

(Visited 119 times, 1 visits today)