BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’
  • ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ
  • ತಾಲ್ಲೂಕಿನಲ್ಲಿ ಭವನ ನಿರ್ಮಾಣಕ್ಕೆ ಸದಸ್ಯರ ಒಕ್ಕೊರಲ ಮನವಿ
  • ಬರವನ್ನು ತುರ್ತು ಪರಿಸ್ಥಿತಿ ಎಂದು ತಿಳಿದು ತ್ವರಿತ ಕೆಲಸ ಮಾಡಿ
  • ಹತ್ತು ವರ್ಷಗಳಿಂದ ಈಡೇರದ ಬೇಡಿಕೆ
  • ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು
  • ಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ
  • ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಏಕತೆಗಾಗಿ ಒಟ – ತುಮಕೂರು ಮ್ಯಾರಾಥಾನ್-2019
Trending

ಏಕತೆಗಾಗಿ ಒಟ – ತುಮಕೂರು ಮ್ಯಾರಾಥಾನ್-2019

By News Desk BenkiyabaleUpdated:February 10, 2019 6:12 pm

 ತುಮಕೂರು:

      ವಿವೇಕಾನಂದ ಕ್ರೀಡಾಕ್ಲಬ್ ಏಕತೆಗಾಗಿ ಓಟ ಎಂಬ ಹೆಸರಿನಲ್ಲಿ ಆಯೋಜಿಸಿದ್ದ ತುಮಕೂರು ಮ್ಯಾರಥಾನ್-2019ರ ಓಟದ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಈಥಿಯೋಪಿಯ ದ ಅಮಾನ್ಯುಲ ಅಬ್ದು ಪ್ರಥಮ ಸ್ಥಾನ ಪಡೆದರೆ, ಮಹಿಳಾ ವಿಭಾಗದಲ್ಲಿ ಚೈತ್ರಾ ದೇವಾಡಿಗ, ಬಾಲಕರ ವಿಭಾಗದಲ್ಲಿ ಬೈರೇಶ್, ಬಾಲಕಿಯರ ವಿಭಾಗದಲ್ಲಿ ಚರಿತಾ ಅವರುಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

      ಸ್ವಾವಿವಿವೇಕಾನಂದ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಈ ಮ್ಯಾರಥಾನ್ ಓಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 781 ಜನ ಕ್ರೀಡಾಪಟುಗಳು ಭಾಗವಹಿಸಿದ್ದು,ಪುರುಷರುರಿಗೆ 10 ಕಿ.ಮಿ. ಮಹಿಳೆಯರಿಗೆ, 16 ವರ್ಷದ ಒಳಗಿನ ಬಾಲಕ,ಬಾಲಕಿಯರಿಗೆ, 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ತಲಾ 5 ಕಿ.ಮಿ. ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

      ಪುರುಷರ 10 ಕಿ.ಮಿ.ಯಲ್ಲಿ ಮೊದಲ ಆರು ಸ್ಥಾನಗಳನ್ನು ಅಮಾನ್ಯುಲ್ ಅಬ್ದು, ಪ್ರವೀಣ್ ಕಂಬಾಳೆ, ಸಂದೀಪ್ ಟಿ.ಎಸ್., ವೆಂಕಟೇಶ್ ಕೆ.ಕೆ, ಸಂತೋಷ್, ಚಂದ್ರಕುಮಾರ್ ಪಡೆದರೆ, ಮಹಿಳಾ ವಿಭಾಗದ 5 ಕಿಮಿ.ಓಟದಲ್ಲಿ ಮೊದಲ ಐದು ಸ್ಥಾನಗಳನ್ನು ಮೂಡಿಬಿದರೆಯ ಚೈತ್ರಾದೇವಾಡಿಗ, ಪ್ರಿಯಾ, ಎಲ್.ಡಿ., ಶಾಲಿನಿ ಕೆ.ಎಸ್., ಪ್ರಿಯಾಂಕ ಹೆಚ್.ಬಿ, ಹಷೀತಾ ಕೆ., ಹಾಗೂ ಬೆಂಗಳೂರಿನ ಸಹನ ಪಡೆದರು.

       16 ವರ್ಷದೊಳಗಿನ ಬಾಲಕರ ಐದು ಕಿ.ಮಿ. ಓಟದಲ್ಲಿ ಶಿವಮೊಗ್ಗ ಬೈರೇಶ್,ಎಸ್,ಡಿ, ಮೂಡಬಿದರೆಯ ದಶರಥ, ಕೋಲಾರದ ನಿರಂಜನ್ ಮೊದಲು ಮೂರು ಸ್ಥಾನ ಪಡೆದರು. ಹಾಗೆಯೇ ಬಾಲಕಿಯರ ವಿಭಾಗದಲ್ಲಿ ಮೂಡಬಿದರೆಯ ಚರಿತಾ ಎನ್.ಸಿ, ಪವಿತ್ರಾ ಹೆಚ್.ಕೆ, ಹಾಗೂ ತುಮಕೂರಿನ ಬಿಲ್ವಶ್ರೀ ಎಸ್.ಪಡೆದರು.

      45 ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ದಾವಣಗೆರೆಯ ಅಣ್ಣಪ್ಪ ಕೆ.ಹೆಚ್, ಬೆಂಗಳೂರಿನ ಎನ್.ವಿ.ನಂಜುಂಡೇಶ್ವರಬಾಬು ಮತ್ತು ತುಮಕೂರಿನ ವಿರೂಪಾಕ್ಷ ಮಾರೆನವರ್ ಮೊದಲ ಮೂರು ಸ್ಥಾನ ಪಡೆದರು.ಮಹಿಳೆಯರ ವಿಭಾಗದಲ್ಲಿ ತುಮಕೂರಿನ ನಂದಿನಿ ಸರಸ್ವತಿ, ದಾವಣಗೆರೆಯ ಹೆಚ್.ಎಲ್.ಜೋತಿ, ತುಮಕೂರಿನ ಉಮಾದೇವಿ ಅವರುಗಳು ಮೊದಲು ಮೂರು ಸ್ಥಾನ ಪಡೆದರು. ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮಗೆರೆ ದಾಟಿದ ಎಲ್ಲಾ ಸ್ಪರ್ಧಾಳುಗಳಿಗೂ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

      ತುಮಕೂರು ಮ್ಯಾರಥಾನ್ 2019ನ ಏಕತಾ ಓಟಕ್ಕೆ ಶಾಸಕ ಜೋತಿ ಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ, ನಗರಪಾಲಿಕೆ ಸದಸ್ಯೆ ಗಿರಿಜಾ ಧನಿಯಕುಮಾರ್,ವಿವೇಕಾನಂದ ಕ್ರೀಡಾಕ್ಲಬ್‍ನ ಅಧ್ಯಕ್ಷ ರಾಮಕೃಷ್ಣ ಚಾಲನೆ ನೀಡಿದರು.

      ನಗರದ ಸರಕಾರಿ ಕಿರಿಯ ಕಾಲೇಜು ಮೈದಾನದಿಂದ ಆರಂಭವಾದ ಓಟ, ಟೌನ್ ಹಾಲ್, ಕೋಡಿಬಸವೇಶ್ವರ ದೇವಾಲಯ, ಶಿವಕುಮಾರಸ್ವಾಮೀಜಿ ಸರ್ಕಲ್, ಎಸ್.ಐ.ಟಿ. ಮುಖ್ಯರಸ್ತೆ, ಎಸ್.ಎಸ್.ಪುರಂ ಮುಖ್ಯರಸ್ತೆ, ರಾಧಾಕೃಷ್ಣ ರಸ್ತೆಯ ಮೂಲಕ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತ್ಯಕಂಡಿತ್ತು. 82 ವರ್ಷ ವಯಸ್ಸಿನ ನಿವೃತ್ತಿ ಸೇನಾ ವಿಂಗ್ ಕಮಾಂಡರ್ ಮಣಿ 5 ಕಿ.ಮಿ. ಓಟ ಪೂರೈಸಿ ಎಲ್ಲರ ಗಮನ ಸೆಳೆದರು.

      ವಿಜೇತರಿಗೆ ಸಂಸದ ಎಸ್.ಪಿ.ಮುದ್ದಹನುಮೇಗೌಡ,ಪಾಲಿಕೆ ಸದಸ್ಯ ಗಿರಿಜಾ ಧನಿಯಕುಮಾರ್, ವಿವೇಕಾನಂದ ಕ್ರೀಡಾಕ್ಲಬ್‍ನ ಸಂಸ್ಥಾಪಕರಾದ ಎಸ್.ಡಿ.ರಾಜಶೇಖರ್, ಚಂದನ್‍ಕುಮಾರ್ ವಿತರಿಸಿದರು.ವೇದಿಕೆಯಲ್ಲಿ ವಿನಯ ಟಿ.ಎಸ್.ದಿಲೀಪ್, ಪ್ರದೀಪ್, ರಾಘವೇಂದ್ರ, ಹರೀಶ್, ಎಕಲವ್ಯ ಪ್ರಶಸ್ತಿ ವಿಜೇತ ಸಿದ್ದಲಿಂಗಮೂರ್ತಿ,ಗುರುಪ್ರಸಾದ್,ಇಂಡಿಯನ್ ಟೀಮ್ ಲೀಡರ್ ಸಿದ್ದಲಿಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

(Visited 78 times, 1 visits today)
Previous Articleರಾಜಕೀಯ ನಾಯಕರ ಅಂತರಿಕ ಕಿತ್ತಾಟದಿಂದ ರಾಜಕೀಯ ಆರಾಜಕತೆ
Next Article ಬಿಜೆಪಿ ಗೆಲುವಿಗೆ ದಲಿತ ಮತಗಳು ಪ್ರಮುಖ ಪಾತ್ರ ವಹಿಸಬೇಕು
News Desk Benkiyabale

Related Posts

ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’

July 17, 2026 5:21 pm news

ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ

July 17, 2026 5:19 pm news

ತಾಲ್ಲೂಕಿನಲ್ಲಿ ಭವನ ನಿರ್ಮಾಣಕ್ಕೆ ಸದಸ್ಯರ ಒಕ್ಕೊರಲ ಮನವಿ

July 17, 2026 5:18 pm news
ತಾಜಾ ಸುದ್ಧಿಗಳು

ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’

July 17, 2026 5:21 pm

ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ

July 17, 2026 5:19 pm

ತಾಲ್ಲೂಕಿನಲ್ಲಿ ಭವನ ನಿರ್ಮಾಣಕ್ಕೆ ಸದಸ್ಯರ ಒಕ್ಕೊರಲ ಮನವಿ

July 17, 2026 5:18 pm

ಬರವನ್ನು ತುರ್ತು ಪರಿಸ್ಥಿತಿ ಎಂದು ತಿಳಿದು ತ್ವರಿತ ಕೆಲಸ ಮಾಡಿ

July 17, 2026 5:26 pm

ಹತ್ತು ವರ್ಷಗಳಿಂದ ಈಡೇರದ ಬೇಡಿಕೆ

July 17, 2026 5:01 pm

ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು

July 17, 2026 4:59 pm
Our Youtube Channel
Our Picks

ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’

July 17, 2026 5:21 pm

ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ

July 17, 2026 5:19 pm

ತಾಲ್ಲೂಕಿನಲ್ಲಿ ಭವನ ನಿರ್ಮಾಣಕ್ಕೆ ಸದಸ್ಯರ ಒಕ್ಕೊರಲ ಮನವಿ

July 17, 2026 5:18 pm

ಬರವನ್ನು ತುರ್ತು ಪರಿಸ್ಥಿತಿ ಎಂದು ತಿಳಿದು ತ್ವರಿತ ಕೆಲಸ ಮಾಡಿ

July 17, 2026 5:26 pm

ಹತ್ತು ವರ್ಷಗಳಿಂದ ಈಡೇರದ ಬೇಡಿಕೆ

July 17, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’

By News Desk BenkiyabaleJuly 17, 2026 5:21 pm

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯವನ್ನು ರಾಷ್ಟçಮಟ್ಟದಲ್ಲಿ ಕೀರ್ತಿಯ ಶಿಖರಕ್ಕೆ ಏರಿಸಿರುವ ಪ್ರೊ. ಎಂ. ವೆಂಕಟೇಶ್ವರಲು ಅವರ ಕಾರ್ಯ ವೈಖರಿ ಹೆಮ್ಮೆಯ ವಿಚಾರ.…

ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ

July 17, 2026 5:19 pm

ತಾಲ್ಲೂಕಿನಲ್ಲಿ ಭವನ ನಿರ್ಮಾಣಕ್ಕೆ ಸದಸ್ಯರ ಒಕ್ಕೊರಲ ಮನವಿ

July 17, 2026 5:18 pm

ಬರವನ್ನು ತುರ್ತು ಪರಿಸ್ಥಿತಿ ಎಂದು ತಿಳಿದು ತ್ವರಿತ ಕೆಲಸ ಮಾಡಿ

July 17, 2026 5:26 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.