Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ
  • ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ
  • ಸೆ.೨೯ ಶುಕ್ರವಾರ ಗುಬ್ಬಿ ಬಂದ್
  • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ
  • ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್
  • ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ
  • ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ
  • ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ
Facebook Twitter Instagram YouTube RSS
Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Benkiyabale
Home » ಬೆಂಗಳೂರಿನಂತೆ ತುಮಕೂರು ನಗರದ ಅಭಿವೃದ್ಧಿಗೆ ಆದ್ಯತೆ
Trending

ಬೆಂಗಳೂರಿನಂತೆ ತುಮಕೂರು ನಗರದ ಅಭಿವೃದ್ಧಿಗೆ ಆದ್ಯತೆ

By News Desk BenkiyabaleUpdated:February 18, 2019 5:38 pm

ತುಮಕೂರು:

        ತುಮಕೂರು ನಗರವನ್ನು ಬೆಂಗಳೂರಿನಂತೆ ಅಭಿವೃದ್ಧಿಪಡಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ತಿಳಿಸಿದರು.

        ಮಹಾನಗರಪಾಲಿಕೆ, ತುಮಕೂರು ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಭಿವೃದ್ಧಿಯಲ್ಲಿ ಬೆಂಗಳೂರಿನ ನಂತರ ತುಮಕೂರು ನಗರ ಮುಂಚೂಣಿಯಲ್ಲಿದ್ದು, ಬೆಂಗಳೂರಿನ ಮಾದರಿಯಲ್ಲಿ ತುಮಕೂರು ನಗರಕ್ಕೂ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಇದರಿಂದ ಬೆಂಗಳೂರಿನ ಜನದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

      ನಗರದ ಅಭಿವೃದ್ಧಿಗಾಗಿ ಗುಬ್ಬಿಗೇಟ್‍ನಿಂದ ಐಡಿಎಸ್‍ಎಂಟಿ ಬಡಾವಣೆವರೆಗೆ ಹೊರ ವರ್ತುಲದಲ್ಲಿ 2 ಕಿ.ಮೀ. ಉದ್ದದ ರಿಂಗ್ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೈತರಿಗೆ ಭೂಸ್ವಾಧೀನ ವೆಚ್ಚ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಕ್ಯಾತ್ಸಂದ್ರ ವಸತಿ ಬಡಾವಣೆಯಲ್ಲಿ ಪ್ರಾಧಿಕಾರದ ವತಿಯಿಂದ ಕ್ರೀಡಾ ಸಮುಚ್ಛಯ ನಿರ್ಮಾಣ ಮಾಡಲು 4.50 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು. ಗೂಳೂರು ಕೆರೆಯ ಅಭಿವೃದ್ಧಿಗಾಗಿ ಅಂದಾಜು ವೆಚ್ಚ 3 ಕೋಟಿ ರೂ.ಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು. ಉಪ್ಪಾರಹಳ್ಳಿ ಕೆರೆಯ 8.11 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಕೆರೆಯನ್ನು ಅಭಿವೃದ್ಧಿಗೊಳಿಸಲು 2.13 ಕೋಟಿ ರೂ.ಗಳಿಗೆ ಯೋಜನಾ ವರದಿಯನ್ನು ತಯಾರಿಸಿ, ತಾಂತ್ರಿಕ ಮಂಜೂರಾತಿಗಾಗಿ ಸಲ್ಲಿಸಲಾಗಿದ್ದು ಅನುಮೋದನೆ ದೊರೆತ ನಂತರ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರಲ್ಲದೆ ರೈತರ ಸಹಭಾಗಿತ್ವದಲ್ಲಿ ವಸತಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅಮಾನಿಕೆರೆ, ಮುತ್ಸಂದ್ರ ಗ್ರಾಮಗಳಲ್ಲಿ ಜಮೀನನ್ನು ಗುರುತಿಸಿದ್ದು ರೈತರೊಂದಿಗೆ ಸಮಾಲೋಚನೆ ನಡೆಸಿ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.

      ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆಯುಕ್ತರನ್ನು ಅತಿ ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದು ತಿಳಿಸಿದರಲ್ಲದೆ, ಸರ್ಕಾರವು ತುಮಕೂರು ನಗರಾಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಕಳೆದ ವರ್ಷ ನಗರೋತ್ಥಾನ ಯೋಜನೆಯಡಿ 100ಕೋಟಿ ರೂ., ಎಸ್.ಎಫ್.ಸಿ. ಹಾಗೂ 14ನೇ ಹಣಕಾಸು ಯೋಜನೆಯಡಿ 20 ಕೋಟಿ ರೂ., ಅಮೃತ್ ಯೋಜನೆಯಡಿ 24 ಗಂಟೆಗಳ ಕಾಲ ನಿರಂತರ ನೀರು ಸರಬರಾಜು ಯೋಜನೆಗಾಗಿ 115 ಕೋಟಿ ರೂ., ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಒಟ್ಟಾರೆ 313 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದ್ದು, ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿವೆ ಎಂದು ತಿಳಿಸಿದರು.

      ಅದೇರೀತಿ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ತುಮಕೂರು ನಗರ 2ನೇ ಹಂತದಲ್ಲಿ ಆಯ್ಕೆಯಾಗಿದ್ದು, 24ನೇ ಸ್ಥಾನದಲ್ಲಿದೆ. ಮುಂದಿನ 3 ತಿಂಗಳಲ್ಲಿ ಸ್ಮಾರ್ಟ್ ಸಿಟಿ ಅಭಿವೃದ್ಧಿಯಲ್ಲಿ ಜಿಲ್ಲೆಯನ್ನು 10ನೇ ಸ್ಥಾನಕ್ಕೆ ತರುವ ಉದ್ದೇಶ ಹೊಂದಲಾಗಿದೆ. ಈಗಾಗಲೇ 309 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, 450 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಮಾರ್ಚ್ ಮಾಹೆಯ ಮೊದಲನೇ ವಾರದಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ತಿಳಿಸಿದರಲ್ಲದೆ, ಸ್ಮಾರ್ಟ್ ಸಿಟಿ ಯೋಜನೆಯು ಹೊಸ ಯೋಜನೆಯಾಗಿರುವುದರಿಂದ ಕಾಮಗಾರಿ ಪ್ರಗತಿಯಲ್ಲಿ ವಿಳಂಬವಾಗುತ್ತಿದೆ ಎಂದರು.

      ಘನತ್ಯಾಜ್ಯ ವಿಲೇವಾರಿಯು ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದ್ದು, ನಗರದ ಘನತ್ಯಾಜ್ಯ ನಿರ್ವಹಣೆಗೆ ಅಜ್ಜಗೊಂಡನಹಳ್ಳಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಪುಲ್ವಾಮದಲ್ಲಿ ಯೋಧರ ಮೇಲೆ ಉಗ್ರರು ದಾಳಿ ಮಾಡಿರುವ ಘಟನೆ ಬಗ್ಗೆ ವೇದನೆಯೊಂದಿಗೆ ಖಂಡನೆ ವ್ಯಕ್ತಪಡಿಸಿದ ಅವರು, ಬೇಧ-ಭಾವವಿಲ್ಲದೆ ಒಗ್ಗಟ್ಟಾಗಿ ನಾವೆಲ್ಲ ತಕ್ಕ ಉತ್ತರ ಕೊಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರದ ಸಹಕಾರ ಸದಾ ಇರುತ್ತದೆ ಎಂದು ತಿಳಿಸಿದರು.

       ಶೈಕ್ಷಣಿಕ ಅಭಿವೃದ್ಧಿ ಯೋಜನೆಯಡಿ ನಗರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಕೃತಿಕ ಪುನರುಜ್ಜೀವನಕ್ಕೆ 15 ಕೋಟಿ ರೂ. ಹಾಗೂ ಎಂಪ್ರೆಸ್ ಬಾಲಕಿಯರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಅವಶ್ಯಕವಿರುವ ಆಡಿಟೋರಿಯಂ, ಪ್ರಯೋಗಾಲಯ, ಲೈಬ್ರರಿ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸುಮಾರು ರೂ.13 ಕೋಟಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರು.

      ಸ್ಮಾರ್ಟ್ ರಸ್ತೆ ಅಭಿವೃದ್ಧಿ ಯೋಜನೆಯಡಿ ನಗರದ ಪ್ರದೇಶಾಧಾರಿತ ಅಭಿವೃದ್ಧಿ ವ್ಯಾಪ್ತಿಯಲ್ಲಿ ಬರುವ 17 ಪ್ರಮುಖ ರಸ್ತೆಗಳನ್ನು ರೂ.191 ಕೋಟಿಗಳ ವೆಚ್ಚದಲ್ಲಿ ಸ್ಮಾರ್ಟ್ ರಸ್ತೆಗಳನ್ನಾಗಿ ಪರಿವರ್ತಿಸಲು ಯೋಜನೆ ಸಿದ್ಧವಾಗಿದ್ದು ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು. ಹಳೆಯ ಬಸ್ ಸ್ಟ್ಯಾಂಡ್ ಪ್ರದೇಶದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ 94 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನವುಳ್ಳ ಬಸ್ ನಿಲ್ದಾಣವನ್ನು ನಿರ್ಮಿಸಲು ಚಿಂತಿಸಲಾಗಿದೆ. ಅಮಾನಿಕೆರೆ ಆವರಣದಲ್ಲಿ ಈಗಾಗಲೇ ಡಿಜಿಟಲ್ ಲೈಬ್ರರಿ, ಎಟಿಎಂ, ಕಾಫಿ ಶಾಪ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಹಾಗೂ ತುಮಕೂರು ಒನ್‍ನಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳುಳ್ಳ ಒಂದು ಸ್ಮಾರ್ಟ್ ಲಾಂಜ್‍ನ್ನು ನಿರ್ಮಿಸಲಾಗಿದ್ದು, ನಗರದಲ್ಲಿ ಇನ್ನು ಹಲವಾರು ಸ್ಮಾರ್ಟ್‍ಲಾಂಜ್‍ಗಳನ್ನು ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

      ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ರೂ.56 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಟ್ರಾಮಾಕೇರ್ ಸೆಂಟರ್ ಸ್ಥಾಪಿಸಲು ಯೋಜಿಸಲಾಗಿದೆ. ಅಮಾನಿಕೆರೆಯಲ್ಲಿ ಸರ್ವಾಂಗೀಣ ಹಾಗೂ ಸೌಂದರ್ಯೀಕರಣ ಮೂಲಕ ಪ್ರವಾಸ ತಾಣವಾಗಿಸಲು ವಿವಿಧ ಯೋಜನೆಗಳ ಜೊತೆಗೆ ಅಮಾನಿಕೆರೆಯನ್ನು ವರ್ಷಾದ್ಯಂತ ತುಂಬಿರುವಂತೆ ಮಾಡಲು ಬುಗುಡನಹಳ್ಳಿ ಕೆರೆಯಿಂದ ನೀರು ಹರಿಸಲು ಯೋಜನೆಯನ್ನು ಕೈಗೊಳ್ಳಲಾಗುವುದು. ನಗರದಲ್ಲಿ ಆಯ್ದ ಉದ್ಯಾನವನಗಳ ಅಭಿವೃದ್ಧಿಗಾಗಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ರಂಗಸ್ವಾಮಿ, ಪಾಲಿಕೆ ಆಯುಕ್ತ ಭೂಬಾಲನ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

(Visited 24 times, 1 visits today)
Previous Articleವೀರ ಯೋಧ ಗುರು ಕುಟುಂಬಕ್ಕೆ ಶಾಸಕರಿಂದ 1 ಲಕ್ಷ ಪರಿಹಾರ ಘೋಷಣೆ!
Next Article ಕುರಿ ಮೈತೊಳೆಯಲು ಹೋಗಿ ನೀರುಪಾಲಾದ ಕುರಿಗಾಹಿ
News Desk Benkiyabale

Related Posts

ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ

September 30, 2023 5:03 pm ತುಮಕೂರು

ಸೆ.೨೯ ಶುಕ್ರವಾರ ಗುಬ್ಬಿ ಬಂದ್

September 27, 2023 4:34 pm ತುಮಕೂರು

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ

September 27, 2023 4:32 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ

September 30, 2023 5:06 pm
ತುಮಕೂರು

ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ

September 30, 2023 5:03 pm
ತುಮಕೂರು

ಸೆ.೨೯ ಶುಕ್ರವಾರ ಗುಬ್ಬಿ ಬಂದ್

September 27, 2023 4:34 pm
ತುಮಕೂರು

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ

September 27, 2023 4:32 pm
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm
ತುಮಕೂರು

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm
Our Youtube Channel
Our Picks

ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ

September 30, 2023 5:06 pm

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm

ಮಾಹಿತಿ ಶಿಕ್ಷಣ ಸಂವಹನ ವಿಶೇಷ ಕಾರ್ಯಕ್ರಮ

August 22, 2023 5:18 pm

ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಬಗೆಹರಿಸಲು ಕೆ.ಎನ್.ರಾಜಣ್ಣ ಸೂಚನೆ

August 17, 2023 4:52 pm
News Tags
Accident Ambedkar Araga jnanendra BJP Bommai Ceo Chikkanayakanahalli Congress corona Cpim crime DC dss epaper gs basavaraju Gubbi jc madhuswamy Jds jyothiganesh Kn rajanna kodigenahalli Koratagere kumaraswamy kunigal madhugiri Mla Mla jyothiganesh mla shrinivas mlc r.rajendra Parameshwar pavagada Police police naveen Protest r.ashok R. Rajendra tumakur tumkur Tumkur dc yspatil Tumkur mahanagara palike tumur turuvekere University Vasanna YSpatil
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm

ಯೌವನಕ್ಕೆ “ವಿವೇಕಾನಂದದೀಕ್ಷೆ’’ ಕೊಡಿ

September 19, 2020 6:23 pm
Don't Miss
ಇತರೆ ಸುದ್ಧಿಗಳು

ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ

By News Desk BenkiyabaleSeptember 30, 2023 5:06 pm

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿ ೪೦೦ ಸ್ವಸಹಾಯ ಗುಂಪಿನ ಸದಸ್ಯರು ಹಾಗೂ ನಗರಸಭಾ ಸದಸ್ಯರನ್ನು ತೊಡಗಿಸಿಕೊಂಡು ಹೆಚ್ಚಾಗಿ ಕಸ ಬಿದ್ದಿರುವ ೧೦೦ಕ್ಕೂ…

ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ

September 30, 2023 5:03 pm

ಸೆ.೨೯ ಶುಕ್ರವಾರ ಗುಬ್ಬಿ ಬಂದ್

September 27, 2023 4:34 pm

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ

September 27, 2023 4:32 pm
News by Date
October 2023
M T W T F S S
 1
2345678
9101112131415
16171819202122
23242526272829
3031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2023 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.