BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ
  • ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು
  • ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?
  • ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ
  • ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್
  • ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಮಾತು: ಆಕ್ರೋಶ
  • ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’
  • ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಅಭದ್ರತೆಯಲ್ಲಿ ಪೊಲೀಸರ ತಪಾಸಣೆ!!
Trending

ತುಮಕೂರು : ಅಭದ್ರತೆಯಲ್ಲಿ ಪೊಲೀಸರ ತಪಾಸಣೆ!!

By News Desk BenkiyabaleUpdated:March 28, 2020 6:50 pm

ತುಮಕೂರು :

      ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಮೊದಲ ಬಲಿಯಾದ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಾದ್ಯಂತ ಹೆಚ್ಚಿನ ಭದ್ರತೆಯನ್ನ ಮಾಡಿದ್ದು, ತುಮಕೂರು ನಗರ ಸೇರಿದಂತೆ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ವ್ಯಾಪಕವಾದ ಭದ್ರತೆ ಹಾಗೂ ಗಸ್ತನ್ನು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿ ನಿರ್ವಹಿಸುತ್ತಿದ್ದು, ಹೆದ್ದಾರಿಗಳ ಭದ್ರತೆ ಮತ್ತು ವಿನಾಕಾರಣ ಜನತೆ ರಸ್ತೆಗಿಳಿಯುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳನ್ನ ಹಾಕಿ ಖುದ್ದು ಪಿಎಸ್‍ಐಗಳೇ ರಸ್ತೆಯಲ್ಲಿ ನಿಂತು ರಸ್ತೆಗಿಳಿದ ಸಾರ್ವಜನಿಕರ ತಪಾಸಣೆಗಿಳಿದಿರುವುದನ್ನ ಗಮನಿಸಿದರೆ, ಕೊರೊನಾ ಮಹಾಮಾರಿಯ ಭೀಬತ್ಸತೆಯನ್ನ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯ ಎನ್ನುವ ನಿರ್ಧಾರಕ್ಕೆ ಜಿಲ್ಲಾ ಪೊಲೀಸರು ಬಂದಿರುವಂತಿದೆ.

      ರಾಷ್ಟ್ರೀಯ ಹೆದ್ದಾರಿಗಳು ಮತ್ತು ಹೊರಜಿಲ್ಲೆಯ ಗಡಿ ಹಾಗೂ ಅಂತರಾಜ್ಯ ಗಡಿಗಳನ್ನ ಗಡಿಯ ಮುಖೇನ ಅಂತರಾಜ್ಯ ಹಾಗೂ ಹೊರಜಿಲ್ಲೆಯ ಜನತೆ ಜಿಲ್ಲೆಯೊಳಗೆ ನುಸುಳದಂತೆ ಜಾಗೃತಿ ವಹಿಸುವುದು ಒಂದೆಡೆಯಾದರೆ ತುಮಕೂರು ನಗರದ ಹಾಗೂ ಜಿಲ್ಲೆಯ ಒಳಗಿನ ಜನ ಕಾನೂನನ್ನು ಉಲ್ಲಂಘಿಸಿ ವಿನಾಕಾರಣ ರಸ್ತೆಗಿಳಿದು ಸೋಂಕನ್ನ ಹರಡುವುದು ಮತ್ತು ತಗುಲಿಸಿಕೊಳ್ಳುವುದನ್ನ ತಪ್ಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿರುವು ಜಿಲ್ಲಾಡಳಿತ ಮತ್ತು ನಗರಪಾಲಿಕೆ, ಆರೋಗ್ಯ ಇಲಾಖೆ ಹೆಚ್ಚಿನದಾಗಿ ಪೊಲೀಸ್ ಇಲಾಖೆ ಹಗಲಿರುಳೆನ್ನದೆ ಶ್ರಮಿಸುತ್ತಿದೆ.

      ಪೊಲೀಸ್ ಇಲಾಖೆಯಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗಳಿಗೂ ತಾನೂ ತನ್ನ ಕುಟುಂಬ ಮಡದಿ-ಮಕ್ಕಳೆನ್ನುವ ಮಮಕಾರವನ್ನ ತೊರೆದು ಸರ್ಕಾರದ ಆದೇಶವನ್ನ ಚಾಚೂ ತಪ್ಪದೇ ಪಾಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ತನ್ನ ಕಾಯಕದ ಬರದಲ್ಲಿ ತನಗೆ ಸೋಂಕು ತಗುಲುತ್ತದೆ ಎಂಬ ಪರಿವು ಹಲವರಿಗಿಲ್ಲ. ಕೇವಲ ಕೆಲಸ, ಇಲಾಖೆ ಎನ್ನುವ ಮಂದಿ ಸರ್ಕಾರಿ ಆದೇಶದ ಜೊತೆಗೆ ಭದ್ರತೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳುವ ಜಾಗೃತಿಯಲ್ಲಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆಯಿದೆ.

      ತನ್ನ ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಲ್ಲಿ ಕಿಂಚಿತ್ತು ಲೋಪವಾದರೂ ತಾನೂ ಮತ್ತು ತನ್ನನ್ನೇ ನಂಬಿರುವ ಕುಟುಂಬವನ್ನು ನಡು ನೀರಲ್ಲಿ ಕೈಬಿಟ್ಟಂತಾಗುತ್ತದೆ. ಇಂತಹ ಜಾಗೃತಿಯಲ್ಲಿ ಬದುಕಬೇಕಾದ ಅನಿವಾರ್ಯತೆಯಿರುವ ಸಂದರ್ಭದಲ್ಲಿ ಯಾವುದನ್ನೂ ಲೆಕ್ಕಿಸದೇ ನಡುರಸ್ತೆಯಲ್ಲಿ ನಿಂತು ಆಗಮಿಸಿರುವಂತಹ ಪ್ರಯಾಣಿಕ ಕೊರೊನಾ ಸೋಂಕಿತನೋ, ಸೋಂಕಿತನಲ್ಲವೋ ಎಂಬ ಪರಿವಿಲ್ಲದೇ ಅವನು ಬರುವ ವಾಹನವನ್ನು ಅಡ್ಡಗಟ್ಟಿ ವಿಚಾರಿಸುವ ರೀತಯನ್ನ ಗಮನಿಸಿದರೆ, ನಿಜಕ್ಕೂ ಮನಸ್ಸಿಗೆ ಖೇದ ಉಂಟಾಗುತ್ತಿದೆ. ಪೊಲೀಸ್ ಸಿಬ್ಬಂಧಿಗಳು ಬಳಸುತ್ತಿರುವ ಮಾಸ್ಕ್‍ಗಳು ಯಾವುದೇ ವೈಜ್ಞಾನಿಕ ರೀತಿಯಲ್ಲಿ ಕಂಡುಬರುತಿಲ್ಲ.

      ಸಿಕ್ಕ ಸಿಕ್ಕ ಮಾಸ್ಕ್ ಗಳನ್ನ ಬಳಸಿ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಯಾವುದೇ ಮಾಸ್ಕ್ ಗಳನ್ನಾಗಲೀ, ಸ್ಯಾನಿಟೈಸರ್ ಲಿಕ್ವಿಡ್‍ಗಳನ್ನಾಗಲೀ ಅಧಿಕೃತವಾಗಿ ನೀಡಿಲ್ಲ. ಆದರೂ, ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತ ರಾಜ್ಯ ಸರ್ಕಾರ ಗಮನಹರಿಸಬೇಕಾದ ಅನಿವಾರ್ಯತೆಯಿದೆ. ಇಲಾಖೆ ತನ್ನ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಅತಿ ಅವಶ್ಯಕವಾದ ಅತ್ಯುನ್ನತ ತಂತ್ರಜ್ಞಾನದ ಪರಿಕರಗಳನ್ನ ನೀಡಿ, ಅವರುಗಳನ್ನ ರಕ್ಷಿಸಬೇಕಾದ ಜವಾಬ್ದಾರಿ ಸರ್ಕಾರದ ಹೊಣೆಗಾರಿಕೆಯಾಗುತ್ತದೆ ಹಾಗೂ ಇಲಾಖೆಯ ಮುಖ್ಯ ಜವಾಬ್ದಾರಿಯಾಗುತ್ತದೆ.

32 ವಾಹನಗಳ ಜಪ್ತಿ :

      ಇಲಾಖೆ ಸಂಬಳವನ್ನು ಹೊರತುಪಡಿಸಿ ಯಾವುದೇ ಭದ್ರತೆಯನ್ನ ಒದಗಿಸದಿದ್ದರೂ ಸಹಾ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಇಂದು 32 ವಾಹನಗಳನ್ನ ಜಪ್ತಿಗೊಳಿಸಿದ್ದಾರೆ. ನಗರದಲ್ಲಿರುವ ಸಿಸಿ ಕ್ಯಾಮೆರಾ ಮತ್ತು ತಪಾಸಣೆ ವೇಳೆ ಸಿಕ್ಕಂತಹ ವಾಹನಗಳನ್ನ ಜಪ್ತಿಗೊಳಿಸಿರುತ್ತಾರೆ.

(Visited 36 times, 1 visits today)
Previous Article52 ಲಕ್ಷ ಮೌಲ್ಯದ ಚಿನ್ನಾಬರಣ ಕಳ್ಳತನ ಮಾಡಿದ ಕಳ್ಳನ ಬಂದನ!!
Next Article ಕೊರೋನಾ ವೈರಸ್ ಹೊಡೆದೋಡಿಸಲು ಸ್ವಯಂಪ್ರೇರಿತರಾದ ನಾಗರಿಕ ಸಮಿತಿ!
News Desk Benkiyabale

Related Posts

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

July 18, 2026 5:51 pm news

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm news

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm news
ತಾಜಾ ಸುದ್ಧಿಗಳು

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

July 18, 2026 5:51 pm

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm

ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ

July 18, 2026 4:08 pm

ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್

July 18, 2026 4:07 pm

ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಮಾತು: ಆಕ್ರೋಶ

July 18, 2026 4:05 pm
Our Youtube Channel
Our Picks

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

July 18, 2026 5:51 pm

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm

ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ

July 18, 2026 4:08 pm

ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್

July 18, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

By News Desk BenkiyabaleJuly 18, 2026 5:51 pm

ತುಮಕೂರು: ಜಿಲ್ಲೆಯ ಶಿರಾ, ಮಧುಗಿರಿ, ಕೊರಟಗೆರೆ ಮತ್ತು ತುಮಕೂರು ಸೇರಿದಂತೆ, ನಾಲ್ಕು ತಾಲ್ಲೂಕುಗಳನ್ನು ಒಳಗೊಂಡ ಪ್ರದೇಶದಲ್ಲಿ ತುಮಕೂರು ಏರ್ ಪೋರ್ಟ್…

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm

ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ

July 18, 2026 4:08 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.