BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
  • ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
  • ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
  • ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ
  • ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ
  • ವೃಕ್ಷಮಾತೆ ಅಜಾರಾಮರ
  • ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ
  • ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಾಸಕ ಡಿ.ಸಿ.ಗೌರಿಶಂಕರ್ ರಿಂದ ೨೫ ಲಕ್ಷ ರೂ. ಹಫ್ತ ವಸೂಲಿ : ಸುರೇಶ್‌ಗೌಡ ಆರೋಪ
Trending

ಶಾಸಕ ಡಿ.ಸಿ.ಗೌರಿಶಂಕರ್ ರಿಂದ ೨೫ ಲಕ್ಷ ರೂ. ಹಫ್ತ ವಸೂಲಿ : ಸುರೇಶ್‌ಗೌಡ ಆರೋಪ

By News Desk BenkiyabaleUpdated:January 25, 2019 5:07 pm

ತುಮಕೂರು:

      ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ ಅವರು ಕಲ್ಲು ಗಣಿಗಾರಿಕೆ ಮಾಲೀಕರಿಂದ ೨೫ ಲಕ್ಷ ರೂ. ಹಫ್ತ ವಸೂಲಿ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುರೇಶ್‌ಗೌಡ ಆರೋಪಿಸಿದ್ದಾರೆ.

     ಇಂದು ನಗರದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಡಿ.ಸಿ.ಗೌರಿಶಂಕರ ಅವರು ಮತ್ತು ಅವರ ಹಿಂಬಾಲಕರಾದ ಹರಳೂರು ಗ್ರಾಮದ ರುದ್ರೇಶ ಮತ್ತು ಸಂಗಡಿಗರು ದಿನಾಂಕ 16-01-2019 ರಂದು ರಾತ್ರಿ 8.30 ಇಂದ 9 ಗಂಟೆ ಸಮಯದಲ್ಲಿ ನಂದಿಹಳ್ಳಿ ಗ್ರಾಮದ ಸರ್ವೆ ನಂಬರ್ 42 ರಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯ ಸ್ಥಳಕ್ಕೆ ಅಕ್ರಮವಾಗಿ ನುಗ್ಗಿ ಕಲ್ಲು ದಿಮ್ಮಿ ತುಂಬಿದ್ದ 6 ಲಾರಿಗಳನ್ನು ಅಡ್ಡಗಟ್ಟಿ ಚಾಲಕರಿಗೆ ಬಾಟಲ್ ತೋರಿಸಿ ತಿವಿಯುವುದಾಗಿ ಬೆದರಿಸಿ ಅದೇ ಚಾಲಕರಿಂದ ಗ್ರಾನೈಟ್ ಮಾಲೀಕರಿಗೆ ಪೋನು ಮಾಡಿಸಿದ ಶಾಸಕರು ಗ್ರಾನೈಟ್ ಮಾಲೀಕರಿಗೆ ರೂ 50 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿರುತ್ತಾರೆ.

Displaying DSC_0074.JPG

       ಈ ವಿಷಯಕ್ಕೆ ಗ್ರಾನೈಟ್ ಮಾಲಿಕರು ಹಣ ನೀಡಲು ತಿರಸ್ಕರಿಸಿರುತ್ತಾರೆ, ಕೂಡಲೇ ಗಣಿ ಮತ್ತು ಭೂ ವಿಜ್ಘಾನ ಇಲಾಖೆಯ ಜಿಯಾಲಿಜಿಸ್ಟ್ ನವೀನ್ ಮತ್ತು ಇಂಜಿನಿಯರ್ ವಿನಯ್ ಹಾಗು ಕ್ಯಾತ್ಸಂದ್ರ ಪಿ,ಎಸ್,ಐ ರಾಜು ಅವರಿಗೆ ಕರೆ ಮಾಡಿ ಶಾಸಕರು ಸ್ಥಳಕ್ಕೆ ಕರೆಸಿಕೊಂಡಿರುತ್ತಾರೆ. ಅಧಿಕಾರಿಗಳು ಶಾಸಕರು ಸೇರಿ ಗ್ರಾನೈಟ್ ಮಾಲೀಕರೊಂದಿಗೆ ಮದ್ಯಸ್ಥಿಕೆ ವಹಿಸಿರುತ್ತಾರೆ, ಆಗ ಗ್ರಾನೈಟ್ ಮಾಲೀಕರು ರೂ 10 ಲಕ್ಷ ರೂ ನೀಡುವುದಾಗಿ ತಿಳಿಸಿರುತ್ತಾರೆ, ಇದಕ್ಕೆ ಶಾಸಕರು ಒಪ್ಪದೇ ಇದ್ದಾಗ ರೂ 30 ಲಕ್ಷ ಹಣ ನೀಡುವಂತೆ ಅಧಿಕಾರಿ ತಿಳಿಸಿರುತ್ತಾರೆ, ಇದಕ್ಕೆ ಸಮ್ಮತಿಸಿದ ಮಾಲೀಕರು ಮಾರನೇ ದಿನ ಬಂದು ಹಣ ನೀಡುವುದಾಗಿ ಭರವಸೆ ನೀಡಿರುತ್ತಾರೆ. 

       ಸ್ಥಳದಲ್ಲಿ ಇದ್ದ ಅಧಿಕಾರಿಗಳು ಮತ್ತು ಪೋಲೀಸರು ವಾಹನಗಳನ್ನು ತಮ್ಮ ವಶಕ್ಕೆ ಪಡೆಯಲು ಮುಂದಾದಾಗ ಅಧಿಕಾರಿಗಳ ವಿರುದ್ದ ಕೆಂಡಾಮಂಡಲರಾದ ಶಾಸಕರನ್ನು ಕಂಡು ಅಧಿಕಾರಿಗಳು, ಅಸಹಾಯಕರಂತೆ ವರ್ತಿಸಿರುತ್ತಾರೆ, ತರುವಾಯ ಹಣ ನೀಡುವವರೆಗೆ ಲಾರಿಗಳು ನಮ್ಮ ಸುಪರ್ಧಿಯಲ್ಲಿ ಇರಲಿ ಎಂದು ತಮ್ಮ ಬೆಂಬಲಿಗ ಜೆಡಿಎಸ್ ಮುಖಂಡ ಹರಳೂರು ರುದ್ರೇಶ ಅವರು ಶಾಸಕರ ಅಣತಿಯಂತೆ 6 ಲಾರಿಗಳ ಪೈಕಿ 4 ಲಾರಿಗಳನ್ನು ಹಿರೇಹಳ್ಳಿ ಕೈಗಾಕಾಪ್ರದೇಶದಲ್ಲಿರುವ ಸೂರ್ಯ ಸೂಪರ್ ಸ್ಟೋನ್ ಪಾಲೀಷ್ ಗ್ರಾನೈಟ್ ಗೋಡಾನಿನಲ್ಲಿ ನಿಲ್ಲಿಸಿಕೊಂಡಿರುತ್ತಾರೆ.

       ದಿನಾಂಕ 17/01/2019 ರಂದು ಮದ್ಯಾಹ್ನ ಸಿದ್ದಗಂಗ ಮಠದ ಸಮೀಪ ಗ್ರಾನೈಟ್ ಮಾಲೀಕರು ರೂ 25 ಲಕ್ಷ ಹಣವನ್ನು ಶಾಸಕರಿಗೆ ನಿಡಿರುತ್ತಾರೆ. ಹಣ ನೀಡಿದ ತರುವಾಯ ಮಾಲೀಕರು ಲಾರಿಗಳನ್ನು ಸೂರ್ಯ ಸೂಪರ್ ಸ್ಟೋನ್ ಪಾಲೀಷ್ ಗ್ರಾನೈಟ್ ಫ್ಯಾಕ್ಟರಿಯಿಂದ ತೆಗೆದುಕೊಂಡು ಹೋಗುವ ಮುಂಚೆ ಸಾರ್ವಜನಿಕರಿಗೆ ಮಾಹಿತಿ ತಿಳಿದು ನಮ್ಮ ಪಕ್ಷದ ಕಾರ್ಯಕರ್ತರು ಲಾರಿ ಇರುವ ಸ್ಥಳಕ್ಕೆ ಹೋಗಿ ಖಚಿತಪಡಿಸಿಕೊಂಡು ಫ್ಯಾಕ್ಟರಿ ಹತ್ತಿರ ಘೇರಾವ್ ಹಾಕಿ ಗಣಿ ಮತ್ತು ಭೂ ವಿಜ್ಘಾನ ಇಲಾಖಾ ಅಧಿಕಾರಿಗಳಿಗೆ ಮತ್ತು ಪೋಲೀಸರಿಗೆ ಮಾಹಿತಿ ತಿಳಿಸಿ ದೂರು ನೀಡಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಪಡಿಸಿದ್ದೇವೆ ಎಂದರು.

Displaying DSC_0085.JPG

      ಗಣಿ ಮತ್ತು ಭೂ ವಿಜ್ಘಾನ ಇಲಾಖಾ ಅಧಿಕಾರಿಗಳು ನಾವು ನೀಡಿರುವ ದೂರನ್ನು ಪರಿಗಣಿಸದೆ ಹಾಲಿ ಶಾಸಕರ ಅಣತಿಯಂತೆ ಅವರಿಗೆ ಬೇಕಾದ ರೀತಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ. ಶಾಸಕರಿಗೆ ಸರ್ಕಾರದ ಬೊಕ್ಕಸದ ಬಗ್ಗೆ ಕಾಳಿಜಿ ಇರುವುದೇ ಆಗಿದ್ದಲ್ಲಿ ಸದರೀ ಲಾರಿಗಳನ್ನು ಇಲಾಖಾ ವಶಕ್ಕೆ ನೀಡಿ ಕೇಸು ಹಾಕಿಸಿ ಸರ್ಕಾರದ ಬೊಕ್ಕಸಕ್ಕೆ ದಂಡ ಪಾವತಿ ಆಗುವಂತೆ ನೋಡಿಕೊಳ್ಳಬೇಕಿತ್ತು ಆದರೆ ಹಿರೇಹಳ್ಳಿ ಗೋಡಾನಿನಲ್ಲಿ ನಿಲ್ಲಿಸಿಕೊಂಡು ವಸೂಲಿಗೆ ಇಳಿದಿರುತ್ತಾರೆ.

       ಈ ವಿಚಾರವಾಗಿ ಹಾಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರ ವಿರುದ್ದ ಮತ್ತು ಸಂಬಂದಪಟ್ಟ ಇಂಜಿನಿಯರ್ ಜಿಯಾಲಿಜಿಸ್ಟ್ ಮತ್ತು ಕ್ಯಾತ್ಸಂದ್ರ ಪಿ,ಎಸ್,ಐ ವಿರುದ್ದ ಸಮಗ್ರ ತನಿಖೆ ನಡೆಸುವಂತೆ ಮಾನ್ಯ ಲೋಕಾಯಕ್ತರು ಕರ್ನಾಟಕ ಹಾಗೂ ಭ್ರಷ್ಠಾಚಾರ ನಿಗ್ರಹ ದಳ (ಎ.ಸಿ.ಬಿ) ದಲ್ಲಿ ನಮ್ಮ ತಾ,ಪಂ ಅಧ್ಯಕ್ಷರಾದ ಗಂಗಾಂಜಿನೇಯ ಅವರು ದೂರು ದಾಖಲಿಸಿದ್ದಾರೆ.

       ಗಣಿಗಾರಿಕೆ ಇಲಾಖೆ ಅಧಿಕಾರಿಗಳು ಮೊಕ್ಕದ್ದಮೆ ದಾಖಲು ಮಾಡುವಾಗ ಕೇವಲ ಕೂಲಿಗೆ ಬಂದಿರುವ ಲಾರಿಗಳ ಮೇಲೆ ಮಾತ್ರ ಕೇಸು ಹಾಕಿದ್ದು ಲಾರಿಗಳ ಮೇಲೆ ಹಾಕಿರುವ ಕೇಸನ್ನು ವಾಪಸ್ಸು ಪಡೆದು ತಪ್ಪಿತಸ್ಥರ ವಿರುದ್ದ ಮೊಕದ್ದಮೆ ದಾಖಲು ಮಾಡುವಂತೆ ಹಾಲಿ ಶಾಸಕರು ತಮ್ಮ ಪ್ರಭಾವವನ್ನು ಬಳಸಿ ತನಿಖೆಯ ದಿಕ್ಕು ತಪ್ಪಸಿ ತನಿಖೆಗೆ ಅಡ್ಡಿ ಪಡಿಸುವ ಸಾಧ್ಯತೆಗಳು ಇರುವುದರಿಂದ ಸದರೀ ವಿಚಾರವನ್ನು ನ್ಯಾಯಯುತವಾಗಿ ಪಾರದರ್ಶಕವಾಗಿ ತನಿಖೆ ನಡೆಸಬೇಕು. ಭ್ರಷ್ಟಾಚಾರದಲ್ಲಿ ಭಾಗಿ ಆಗಿರುವ ಶಾಸಕರನ್ನು ಮತ್ತು ಸ್ಥಳದಲ್ಲೇ ಇದ್ದು ಕುಮ್ಮಕ್ಕು ನೀಡಿರುವ ಅಧಿಕಾರಿಗಳನ್ನು ಬಂದಿಸಬೇಕೆಂದು ಆಗ್ರಹಿಸಿದ್ದಾರೆ.

 

(Visited 590 times, 1 visits today)
Previous Articleಶ್ರೀಗಳ ಸ್ಮರಣಾರ್ಥ ಸರ್ಕಾರಿ ಕಾರ್ಯಕ್ರಮ ರೂಪಿಸಲು ಆಯವ್ಯಯದಲ್ಲಿ ಮಂಡನೆ
Next Article 5ನೇ ವಾರ್ಡಿನ ಅಭಿವೃದ್ಧಿಗೆ ಅನುದಾನ: ಸಂಸದ ಮುದ್ದಹನುಮೇಗೌಡ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm
ಇತರೆ ಸುದ್ಧಿಗಳು

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm
ಇತರೆ ಸುದ್ಧಿಗಳು

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
ಇತರೆ ಸುದ್ಧಿಗಳು

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
Our Youtube Channel
Our Picks

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

By News Desk BenkiyabaleNovember 15, 2025 4:33 pm

ತುಮಕೂರು: ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದಲ್ಲಿ ಇರುವುದನ್ನು ಯಥಾವತ್ತಾಗಿ ತಿಳಿಸುವುದಷ್ಟೇ ಅಲ್ಲ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು…

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.